ಗಾಂಧಿ ಜಯಂತಿ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ: ಮಸಗಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿನಿ ಹೆಚ್.ಪಿ. ರಕ್ಷಿತಾಗೆ ಪ್ರಥಮ ಸ್ಥಾನ
ಹೊಸನಗರ: ತಾಲೂಕಿನ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಹೆಚ್.ಪಿ. ರಕ್ಷಿತಾ ಸೋಮವಾರ ಗಾಂಧಿ ಜಯಂತಿ ನಿಮಿತ್ತ ಜಿಲ್ಲಾ ಮಟ್ಟದಲ್ಲಿ ನಡೆದ ಪ್ರೌಢ ಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ.
ವಾರ್ತಾ ಮತ್ತು ಪ್ರಸಾರ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ’ಗಾಂಧೀಜಿ ನನಗೇಕೆ ಇಷ್ಟವಾಗುತ್ತಾರೆ?’ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮಸಗಲ್ಲಿ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿನಿ ಹೆಚ್.ಪಿ. ರಕ್ಷಿತಾ ಶಿವಮೊಗ್ಗ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್. ಸೆಲ್ವಮಣಿ ಪ್ರಶಸ್ತಿ ಪತ್ರ ಮತ್ತು 3000 ರೂ ನಗದು ಬಹುಮಾನ ನೀಡಿ ಪುರಸ್ಕರಿಸಿದರು. ಹೊಸನಗರ ತಾಲ್ಲೂಕು ಬಿ ಇ ಓ ಹೆಚ್. ಆರ್. ಕೃಷ್ಣಮೂರ್ತಿ , ಹೊಸನಗರ ತಾಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರೇಣುಕೇಶ್ ಮತ್ತು ಮಸಗಲ್ಲಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ರಕ್ಷಿತಾಳನ್ನು ಅಭಿನಂದಿಸಿರುತ್ತಾರೆ.
ಕಾಮೆಂಟ್ಗಳಿಲ್ಲ