Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಸಾಗರದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗುದ್ದಿದ ಬೈಕ್‌ - ಮೂವರಿಗೆ ಗಾಯ

ಸಾಗರ : ಇಲ್ಲಿನ ಗಾಂಧಿನಗರ ಸರ್ಕಲ್ಲಿನಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿ​ಗೆ ಬೈಕ್​ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ. 

ನಗರದ ಗಾಂಧಿನಗರ ಸರ್ಕಲ್ಲಿನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್ಸಿ(KA-17, F-1766)ಗೆ ವೇಗದಿಂದ ಬಂದ ಬೈಕ್​ (KA-27 H-2161)ವೊಂದು ಗುದ್ದಿದ್ದು, ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದೆ ಎನ್ನುವ ಮಾಹಿತಿ ಇದೆ. ಘಟನೆ ನಡೆದ ತಕ್ಷಣ ಸಾಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಬೈಕ್ ತೆರವುಗೊಳಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮೆಂಟ್‌ಗಳಿಲ್ಲ