Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದ ಕೆಇಬಿ ವೃತ್ತ ಇನ್ನು ಮುಂದೆ 'ಯುವರತ್ನ ಪುನೀತ್ ರಾಜಕುಮಾರ್ ವೃತ್ತ' - ಶಾಸಕ ಬೇಳೂರು ಗೋಪಾಲಕೃಷ್ಣ ಘೋಷಣೆ

ಹೊಸನಗರ : ಇಲ್ಲಿನ ಲೋಕೋಪಯೋಗಿ ಇಲಾಖೆ, ಮೆಸ್ಕಾಂ ಇಲಾಖೆ  ಹಾಗೂ ಅರಣ್ಯಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸುವ ವೃತ್ತವನ್ನು ಸುಸಜ್ಜಿತವಾಗಿ ನಿರ್ಮಿಸಿ, ಈ ವೃತ್ತವನ್ನು ಇನ್ನುಮುಂದೆ ಯುವರತ್ನ ಪುನೀತ್ ರಾಜಕುಮಾರ್ ಅವರ ಹೆಸರಿನಿಂದ ಕರೆಯಬೇಕೆಂದು ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದರು.

ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಶರಣ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿರುವಾಗ ಈ ವೃತ್ತದಲ್ಲಿ ಕೆಲಕಾಲ ನಿಂತು, ಈಗ ಈ ರಸ್ತೆಯಲ್ಲಿ ರಾಷ್ಟ್ರೀಯ ಹೆದ್ದಾರಿ 776 ಸಿ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಇಲ್ಲಿ ಸುಸಜ್ಜಿತ ವೃತ್ತವನ್ನು ನಿರ್ಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸುವಂತೆ ತಮ್ಮ ಕಚೇರಿ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಅವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಳೂರು ಸೇವಾ ಸಹಕಾರ ಸಂಘದ ಅಧ್ಯಕ್ಷ ಡಿ.ಆರ್. ವಿನಯ್, ಪಟ್ಟಣ ಪಂಚಾಯತಿ ಸದಸ್ಯ ಕೆ. ಕೆ. ಅಶ್ವಿನಿ ಕುಮಾರ್, ಯುವರತ್ನ ಪುನೀತ್ ರಾಜಕುಮಾರ್ ಕನ್ನಡ ಸಂಘದ ಅಧ್ಯಕ್ಷ ಪ್ರಶಾಂತ್, ಬಾವಿಕಟ್ಟೆ ಸತೀಶ್, ಗಣೇಶ, ಸಿ.ಟಿ. ಮಂಜು ಕೆ.ಪಿ. ಮಾಲತೇಶ್, ಕಾಳಿಕಾಪುರ ಗಣೇಶ್, ನಾಗರಾಜ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೊಸನಗರಕ್ಕೆ ಭೇಟಿ ನೀಡಿದ್ದ ನಟ ಶಿವರಾಜ್ ಕುಮಾರ್ ಅವರು ಸಹ ಈ ವೃತ್ತದಲ್ಲಿ ನಿಂತು, ಈ ವೃತ್ತದಲ್ಲಿದ್ದ ತಮ್ಮ ಸಹೋದರನ ಭಾವಚಿತ್ರಕ್ಕೆ ಅಶ್ರುತರ್ಪಣದೊಂದಿಗೆ ಪುಷ್ಪ ನಮನ ಸಲ್ಲಿಸಿದ್ದರು.


ಕಾಮೆಂಟ್‌ಗಳಿಲ್ಲ