Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಮೇಲಿನಬೆಸಿಗೆಯಲ್ಲಿ ಗೋಮಾಳ ಅಕ್ರಮ ಭೂ ಒತ್ತುವರಿ ದೂರು - ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ಅವರಿಂದ ಒತ್ತುವರಿ ತೆರವುಗೊಳಿಸಲು ಸೂಚನೆ

ಹೊಸನಗರ : ತಾಲ್ಲೂಕಿನ ಹುಂಚ ಹೋಬಳಿ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದ ಸರ್ವೆ ನಂ 17ರ 38 ಎಕರೆ ಸರ್ಕಾರಿ ಗೋಮಾಳದಲ್ಲಿ, ಶ್ರೀಧರ್ ಬಿನ್ ರಾಜಪ್ಪಗೌಡ ಎಂಬಾತ ಅಕ್ರಮವಾಗಿ ಸುಮಾರು ನಾಲ್ಕೈದು ಎಕರೆಯಷ್ಟು ಭೂ ಒತ್ತುವರಿ ಮಾಡಿ ಕೃಷಿ ಚಟುವಟಿಕೆಯಲ್ಲಿ ನಿರತನಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ದೂರುಗಳು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಗರ್‌‌‌ಹುಕುಂ 53 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದ ಒತ್ತುವರಿದಾರನ ಅರ್ಜಿ ಈಗಾಗಲೇ ವಜಾಗೊಂಡಿದ್ದು, ಅದೇ ಕಂದಾಯ ಗೋಮಾಳ ಭೂಮಿಗೆ ಮತ್ತೆ ಬಗರ್‌ಹುಕುಂ 57ರ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆಯಾಗಿದೆ. ಆದರೆ, ಸ್ಥಳೀಯ ಗ್ರಾಮಸ್ಥರ ತೀವ್ರ ವಿರೋಧದ ಕಾರಣ ಮುಂದಿನ ಸಭೆಯಲ್ಲಿ ಅರ್ಜಿ ವಜಾಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಗ್ರಾಮಸ್ಥರಿಂದ ಗೋಮಾಳ ಭೂಮಿ ತೆರವಿಗೆ ಮೇಲಿಂದ ಮೇಲೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಲಾಗಿದ್ದು, ಕೂಡಲೇ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಅರ್ಜಿದಾರರಿಗೆ ತಹಶೀಲ್ದಾರ್‌ ರಶ್ಮಿ ಹಾಲೇಶ್ ಅವರು ಸೂಚಿಸಿದ್ದಾರೆ. ತಪ್ಪಿದಲ್ಲಿ ಸೂಕ್ತ ಕಾನೂನು ಕ್ರಮಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ನವೀನ್, ಗ್ರಾಮ ಸಹಾಯಕ ನಾಗರಾಜ, ಗ್ರಾಮಸ್ಥರಾದ ಬಸವಣಪ್ಪ ಗೌಡ, ಚನ್ನಬಸಪ್ಪ ಗೌಡ, ಗಣೇಶ್, ತೇಜಪ್ಪಗೌಡ, ಶಶಿಕುಮಾರ, ಮೇಲಿನಬೆಸಿಗೆ ಗ್ರಾಮ ಪಂಚಾಯ್ತಿ ಸದಸ್ಯ ಧರ್ಮಪ್ಪ ಮೊದಲಾದವರು ಸ್ಥಳದಲ್ಲಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ