ಹೊಸನಗರದಲ್ಲಿ ಅಕ್ರಮ ಮರಳು ಸಾಗಾಟ - ಅರಣ್ಯ ಇಲಾಖೆಯಿಂದ ಮತ್ತೆ ಎರಡು ಟಿಪ್ಪರ್ ವಶ
ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲ್ಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಹೊಸನಗರ ತಾಲ್ಲೂಕು ಗ್ರಾಮ ಪಂಚಾಯತಿ ಒಕ್ಕೂಟಗಳ ಅಧ್ಯಕ್ಷ ಹಾಗೂ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ ರೆಡ್ಡಿಗೆ ಸೇರಿದ ಟಿಪ್ಪರ್ನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ.
ಎಸಿಎಫ್ ಕೆ.ಬಿ.ಮೋಹನ್ ಮಾರ್ಗದರ್ಶನ, ಆರ್ ಎಫ್ ಓ ಎಂ.ರಾಘವೇಂದ್ರ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ, ಉಪ ವಲಯ ಅರಣ್ಯಾಧಿಕಾರಿಗಳಾದ ಹಾಲೇಶ್ ಕುಮಾರ್, ಎಸ್.ವಿ.ಷಣ್ಮುಖ ಪಾಟೀಲ್, ಗಸ್ತು ಅರಣ್ಯ ಪಾಲಕ ಜೆಸ್ಸಿ ಲಾಯ್ಡ್ ಕಾರ್ಲೋ ಪಾಲ್ಗೊಂಡಿದ್ದರು.
ಕಾಮೆಂಟ್ಗಳಿಲ್ಲ