ಹೊಸನಗರ ತಾಲ್ಲೂಕಿನ ಮಳೆಹಾನಿ ಪ್ರದೇಶಗಳಿಗೆ ಜಿ. ಪಂ. ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಭೇಟಿ - ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
ಹೊಸನಗರ : ತಾಲ್ಲೂಕಿನೆಲ್ಲೆಡೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ನಿನ್ನೆ ಕೆಪಿಸಿಸಿ ಕಾರ್ಯದರ್ಶಿ, ಜಿ.ಪಂ. ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ತಾಲ್ಲೂಕಿನ ಪುರಪ್ಪೆಮನೆ, ಹರಿದ್ರಾವತಿ, ಮಾರುತೀಪುರ, ಕೋಡೂರು, ಜೇನಿ ಹಾಗೂ ಸೊನಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಹಲವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು. ಗುರುವಾರ ದಿನ ಪೂರ್ತಿ ಹಾನಿಗೊಳಗಾದ ನಿಂಬೆಸರದ ಹಾನಿಯಾದ ರಸ್ತೆ, ಕುಸುಗುಂಡಿ ಧರೆ ಕುಸಿತ, ಒಡೆದ ಕೆರೆ ಚಾನಲ್ ದಂಡೆ, ಮೈತಳ್ಳಿ, ಸಾವಂತೂರಿನ ವಿವಿಧ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು.
CLICK ಮಾಡಿ - ಸಂಪೇಕಟ್ಟೆ ನಿಟ್ಟೂರು - ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನ ಮೇಲೆ ಬಿದ್ದ ವಿದ್ಯುತ್ ಕಂಬ!
ಈಗಾಗಲೇ ಮಳೆಹಾನಿ ಕುರಿತು ಪಿಡಿಓಗಳಿಂದ ವರದಿ ಪಡೆದು, ಶಾಸಕ ಬೇಳೂರು ಗೋಪಾಲಕೃಷ್ಣ ಅವರೊಂದಿಗೆ ಮತ್ತೊಮ್ಮೆ ಭೇಟಿ ನೀಡುವುದಾಗಿ ಗ್ರಾಮಸ್ಥರಿಗೆ ತಿಳಿಸಿದರು.
ಈಗಾಗಲೇ ಮನೆ ಹಾನಿಗೊಳಗಾದ ಕೆಲವರಿಗೆ ಶಾಸಕರ ಆಪ್ತರ ಮೂಲಕ ವೈಯಕ್ತಿಕ ಧನಸಹಾಯ ನೀಡಿದ್ದು, ಗಾಳಿ-ಮಳೆಗೆ ವಿದ್ಯುತ್ ಕಣ್ಣಾಮುಚ್ಚಾಲೆ ಕುರಿತಂತೆ ದುರಸ್ತಿಗೆ ಕ್ರಮಕ್ಕೆ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ಪುರಪ್ಪೆಮನೆ ಗ್ರಾ.ಪಂ. ಸದಸ್ಯ ಸಂತೋಷ, ಮಾರುತೀಪುರ ಗ್ರಾ.ಪಂ. ಸದಸ್ಯ ಇಂದ್ರೇಶ್, ಮಾಜಿ ಅಧ್ಯಕ್ಷ ಚಿದಂಬರ, ಜೇನಿ ಗ್ರಾ.ಪಂ. ಸದಸ್ಯ ಭದ್ರಪ್ಪ, ಗ್ರಾ.ಪಂ. ಉಪಾಧ್ಯಕ್ಷ ಎಂ.ಕೃಷ್ಣಮೂರ್ತಿ, ಪಿಡಿಓ ಕಾವೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ