Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರ ತಾಲ್ಲೂಕು ಕಸಬಾ ಹೋಬಳಿಯಲ್ಲಿ ಇಂದು 4 ಎಕರೆ ಅರಣ್ಯ ಒತ್ತುವರಿ ತೆರವು

ಹೊಸನಗರ :  ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲ್ಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಇಂದು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು 4 ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ, ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟರು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ತಾಲ್ಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು ಅರಣ್ಯದಲ್ಲಿ ಎರಡು ಎಕರೆ ಹಾಗೂ ಹಿರೇಮೈಥಿ ಗ್ರಾಮದ ಸ.ನಂ.1ರ ಹರಿದ್ರಾವತಿ ರಾಜ್ಯ ಅರಣ್ಯ ಪ್ರದೇಶದ ಎರಡು ಎಕರೆ ಅರಣ್ಯ ಭೂ ಪ್ರದೇಶದ ಒತ್ತುವರಿ ತೆರವುಗೊಳಿಸಿ ಸಸಿ ನೆಟ್ಟ ಸಿಬ್ಬಂದಿಗಳು ಈ ಮೂಲಕ ಹಸಿರೀಕರಣ ಮಾಡಿದ್ದಾರೆ.

CLICK ಮಾಡಿ - ಕಡಸೂರು ಗ್ರಾಮದ 1 ಎಕರೆ ಅರಣ್ಯ ಒತ್ತುವರಿ ತೆರವು

ಒಟ್ಟಾರೆ 4 ಎಕರೆ ಅರಣ್ಯ ಪ್ರದೇಶ ಒತ್ತುವರಿ ತೆರವುಗೊಳಿಸಲಾಗಿದೆ. ರಾಜ್ಯ ಸರ್ಕಾರ ಅರಣ್ಯ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಲು ಸೂಚಿಸಿದ ಬೆನ್ನಲ್ಲೆ ತೆರವು ಕಾರ್ಯವನ್ನು ಇಲಾಖೆ ಚುರುಕುಗೊಳಿಸಿದೆ.

ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಈ ಒತ್ತುವರಿ ತೆರವು ಕಾರ್ಯ ನಡೆದಿದೆ.

ಕಾಮೆಂಟ್‌ಗಳಿಲ್ಲ