ನಗರ ಮೂಡುಗೊಪ್ಪ ಕಾಲುಸಂಕ ಅವಘಡ - ಮೃತ ಮಹಿಳೆ ಕುಟುಂಬಕ್ಕೆ ರೂ 5 ಲಕ್ಷ ಪರಿಹಾರದ ಚೆಕ್ ವಿತರಿಸಿದ ಶಾಸಕ ಆರಗ ಜ್ಞಾನೇಂದ್ರ
ಹೊಸನಗರ : ಈ ಬಾರಿಯ ನೆರೆ ಹಾವಳಿ ವೇಳೆ ಕಾಲುಸಂಕ ದಾಟುವಾಗ ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈಸೆ ಗ್ರಾಮದ ಶ್ರೀಧರಪುರ ನಿವಾಸಿ ಶಶಿಕಲಾ ಕುಟುಂಬಕ್ಕೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರೂ 5 ಲಕ್ಷ ಮೌಲ್ಯದ ಪರಿಹಾರದ ಚೆಕ್ ವಿತರಿಸಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿ, ಇತ್ತೀಚೆಗೆ ತಾಲ್ಲೂಕಿನ ಕರಿಮನೆ ಗ್ರಾಮದ ರೈತ ಎನ್.ಟಿ. ತಿಮ್ಮಪ್ಪ ಸಾಲಭಾದೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಕುಟುಂಬಕ್ಕೂ ಶೀಘ್ರದಲ್ಲೇ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದರು.
CLICK ಮಾಡಿ -ಹೊಸನಗರ ಶಾಸಕರ ಮಾದರಿ ಸರ್ಕಾರಿ ಶಾಲೆಯಲ್ಲಿ ಕೃಷ್ಣ ವೇಷ ಸ್ಪರ್ಧೆ
ಈ ವೇಳೆ ತಹಶೀಲ್ದಾರ್ ರಶ್ಮಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಕೆ.ವಿ.ಸುಬ್ರಹ್ಮಣ್ಯ, ಉಪಾಧ್ಯಕ್ಷ ನರ್ತಿಗೆ ಸುರೇಶ್, ನಗರ ಶಕ್ತಿ ಕೇಂದ್ರದ ಅಧ್ಯಕ್ಷ ಹೆಬ್ಬುರಳಿ ರಮಾಕಾಂತ, ಪ್ರಮುಖರಾದ ಬೈಸೆ ಅರುಣ, ಶಾಸಕರ ಆಪ್ತ ಕಾರ್ಯದರ್ಶಿ ಹೊದ್ಲ ಬಸವರಾಜ್, ರಾಜೇಶ್ ಹಿರಿಮನೆ, ಆನಂದ್ ಗುಡ್ಡೇಕೊಪ್ಪ, ಮಾರುತಿ, ರಮೇಶ್, ಮೃತರ ಪುತ್ರರಾದ ಸುದೀಪ್, ಸುಮಂತ್ ಹಾಗೂ ಕುಟುಂಬ ವರ್ಗದವರು ಹಾಜರಿದ್ದರು.
ಕಾಮೆಂಟ್ಗಳಿಲ್ಲ