ಕೃಷಿ ಇಲಾಖೆಯಿಂದ ಕೆರೆಹಳ್ಳಿಯಲ್ಲಿ ಡ್ರೋಣ್ ಬಳಸಿ ನ್ಯಾನೋ ಯೂರಿಯ ಸಿಂಪಡಣೆ - ರೈತರಿಗೆ ಉಚಿತ ಪ್ರಾತ್ಯಕ್ಷಿಕೆ
ರಿಪ್ಪನ್ಪೇಟೆ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ನ್ಯೂಸ್ ಪೋಸ್ಟ್ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ
ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು ಸಮಗ್ರ ಮಾಹಿತಿ ನೀಡಿದರು.
ರಿಪ್ಪನ್ಪೇಟೆ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶರಣಗೌಡ, ಜಿಲ್ಲಾ ಐಎಫ್ಸಿಓ ಸಂಸ್ಥೆಯ ಕ್ಷೇತ್ರಾಧಿಕಾರಿ ಬಿ.ಎಲ್. ರಾಜು, ಆತ್ಮ ಯೋಜನೆಯ ಸಿಬ್ಬಂದಿ ಸೈಯದ್ ಅವರ ಸಹಕಾರದಲ್ಲಿ ಈ ಪ್ರಾತ್ಯಕ್ಷಿಕೆ ನಡೆಯಿತು.
ಕಾಮೆಂಟ್ಗಳಿಲ್ಲ