Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಅಡ್ಡೇರಿ ಸಮೀಪ ಬೈಕ್ ಸಮೇತ ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾ* ವು

ಹೊಸನಗರ : ತಾಲ್ಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾರೋಹಿತ್ತಲು ಬಳಿಯ ಅಡ್ಡೇರಿ ಗ್ರಾಮದ ಬಳಿ ರಸ್ತೆ ಬದಿಯ ಹಳ್ಳಕ್ಕೆ ಬೈಕ್ ಸಹಿತ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಿನ್ನೆ ಸಂಜೆ ನಡೆದಿದೆ.

ಹಾರೋಹಿತ್ತಲು ನಿವಾಸಿ ದೇವೇಂದ್ರಪ್ಪ (55) ಎಂದಿನಂತೆ ಡೈರಿಗೆ ಹಾಲು ಹಾಕಿ ಬೈಕಿನಲ್ಲಿ ಮನೆಗೆ ಮರಳುತ್ತಿದ್ದಾಗ ರಸ್ತೆ ಪಕ್ಕದಲ್ಲಿರುವ ಇಪ್ಪತ್ತು ಅಡಿಗೂ ಹೆಚ್ಚು ಆಳದ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ರಸ್ತೆಯಲ್ಲಿ ಬರುವಾಗ ಆಯತಪ್ಪಿ ಹಳ್ಳಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಳೆ ನೀರು ಹರಿದು ಹೋಗಿ ಈ ಹಳ್ಳ ನಿರ್ಮಾಣವಾಗಿದ್ದು, ಹಳ್ಳದಲ್ಲಿ ಮಳೆ ನೀರು ನಿಂತಿತ್ತು. 

CLICK ಮಾಡಿ - ನಿಟ್ಟೂರು ಗ್ರಾ.ಪಂ.ಸದಸ್ಯನ ಮೇಲೆ ಹಲ್ಲೆ ಪ್ರಕರಣ - ಸದಸ್ಯ ನಾಗೋಡಿ ವಿಶ್ವನಾಥ್ ಬೆಂಬಲಕ್ಕೆ ನಿಂತ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ

ನಿನ್ನೆ ರಾತ್ರಿಯೇ ಸ್ಥಳೀಯರ ನೆರವಿನಿಂದ ಪೊಲೀಸರು ಮೃತದೇಹ ಮತ್ತು ಬೈಕ್‌ನ್ನು ಹಳ್ಳದಿಂದ ಹೊರಗೆ ತೆಗೆದಿದ್ದು, ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಕಾಮೆಂಟ್‌ಗಳಿಲ್ಲ