Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಿಟ್ಟೂರು ಗ್ರಾ.ಪಂ.ಸದಸ್ಯನ ಮೇಲೆ ಹಲ್ಲೆ ಪ್ರಕರಣ - ಸದಸ್ಯ ನಾಗೋಡಿ ವಿಶ್ವನಾಥ್ ಬೆಂಬಲಕ್ಕೆ ನಿಂತ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ

ಹೊಸನಗರ : ಸಹಕಾರಿ ಸಂಘದ ಚುನಾವಣೆಗೆ ಸಂಬಂಧಿಸಿದ ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವುದನ್ನು ಖಂಡಿಸಿ ತಾಲ್ಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟವು ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಂದು ತಾಲ್ಲೂಕು ಪಂಚಾಯಿತಿ ಇಓ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ನಿಟ್ಟೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವರ ಮೇಲೆ ಬಿಜೆಪಿ ಕಾರ್ಯಕರ್ತ ದೇವರಾಜ್ ಎಂಬಾತ ಮಾರಣಾಂತಿಕ ಹಲ್ಲೆ ಮಾಡಿದ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಹ ನಿನ್ನೆ ವಿಶ್ವನಾಥ್ ಅವರ ಮನೆಗೆ ಭೇಟಿ ನೀಡಿ ನೈತಿಕ ಸ್ಥೈರ್ಯ ತುಂಬಿದ್ದರು.

CLICK ಮಾಡಿ - ಹಲ್ಲೆಗೊಳಗಾಗಿದ್ದ ನಿಟ್ಟೂರು ಗ್ರಾ. ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಕಿಮ್ಮನೆ ರತ್ನಾಕರ್‌ ಭೇಟಿ

ಈ ಹಿನ್ನೆಲೆಯಲ್ಲಿ ತಾಲ್ಲೂಕು ಗ್ರಾಮ ಪಂಚಾಯಿತಿ ಒಕ್ಕೂಟದ ಸದಸ್ಯರು ಇಂದು ಒಕ್ಕೂಟದ ಅಧ್ಯಕ್ಷ ಶ್ರೀನಿವಾಸ ರೆಡ್ಡಿ ನೇತೃತ್ವದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಗುರಣ್ಣ ಎಸ್. ಹೆಬ್ಬಾಳ್ ಅವರನ್ನು ಭೇಟಿ ಮಾಡಿ ಆರೋಪಿ ದೇವರಾಜ್ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಹೆಚ್. ಬಿ. ಚಿದಂಬರ, ಮಾರುತೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪಿಕಾ ಕೃಷ್ಣಪ್ಪ, ನಿಟ್ಟೂರು ಸುಬ್ರಹ್ಮಣ್ಯ ಮೊದಲಾದವರು ಇದ್ದರು.

ಕಾಮೆಂಟ್‌ಗಳಿಲ್ಲ