Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಹೊಸನಗರದಲ್ಲಿ ಕು.ಅನಿತಾ ಸರ್ವಾಧ್ಯಕ್ಷತೆಯಲ್ಲಿ ಯಶಸ್ವಿ ತಾಲ್ಲೂಕು ಮಟ್ಟದ 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ: ಕನ್ನಡ ಭಾಷೆ, ಸಾಹಿತ್ಯ, ಕನ್ನಡತನ ಉಳಿಸಿ ಬೆಳೆಸುವ ಕಾರ್ಯ ಕನ್ನಡನಾಡಿನ ಪ್ರತಿಯೊಬ್ಬ ನಾಗರೀಕನ ಆದ್ಯ ಕರ್ತವ್ಯವಾಗಿದೆ ಎಂದು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಬಟ್ಟೆಮಲ್ಲಪ್ಪ ರಾಮಕೃಷ್ಣ ಶಾಲೆಯ ವಿದ್ಯಾರ್ಥಿನಿ ಕು. ಅನಿತಾ ತಿಳಿಸಿದರು.

ಪಟ್ಟಣದ ಶ್ರೀ ಗುರೂಜಿ ಇಂಟರ್ ನ್ಯಾಶನಲ್ ರೆಸಿಡೆನ್ಷಿಯಲ್ ಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ತಾಲ್ಲೂಕು ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಜಾನಪದ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳಲ್ಲಿ ಬಾಲ್ಯದಿಂದಲೇ ಕನ್ನಡ ಭಾಷಾಭಿಮಾನ, ಕರುನಾಡ ಸಂಸ್ಕೃತಿ, ಕನ್ನಡತನ ಕುರಿತು ಅರಿವು ಮೂಡಿಸಲು ಸಾಹಿತ್ಯ ಸಮ್ಮೇಳನದ ಆಯೋಜನೆ ಸಹಕಾರಿಯಾಗಲಿದೆ ಎಂದ ಕು. ಅನಿತಾ, ಕನ್ನಡ ಭಾಷೆಯು ತನ್ನದೇ ಆದ ಭವ್ಯ ಇತಿಹಾಸ ಹೊಂದಿದೆ. ಇಂತಹ ನಾಡಿನಲ್ಲಿ ಜನ್ಮ ತಾಳಿ, ಕಾವೇರಿ ತಾಯಿಯ ನೀರು ಕುಡಿದ ನಾವೆಲ್ಲ ನಿಜಕ್ಕೂ ಧನ್ಯರು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದರು.

CLICK ಮಾಡಿ - ಮುಂಬಾರು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು - ಹೊಸನಗರ ಬ್ಲಾಕ್ ಕಾಂಗ್ರೆಸ್ಸಿನಿಂದ ಅಭಿನಂದನಾ ಸಮಾರಂಭ

ಕಸಾಪ ಜಿಲ್ಲಾಧ್ಯಕ್ಷ ಡಿ. ಮಂಜುನಾಥ ಮಾತನಾಡಿ, ಪ್ರಸಕ್ತ ವಿಶ್ವದಲ್ಲಿನ 8 ಸಾವಿರ ಭಾಷೆಗಳಲ್ಲಿ ಕೇವಲ 20 ಭಾಷೆಗಳು ಪದಗುಚ್ಛ ಹೊಂದಿದ್ದು, ಅವುಗಳಲ್ಲಿ ಕನ್ನಡ ಭಾಷೆಯೂ ಸಹ ಒಂದು ಎಂಬುದೇ ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ ಎಂದರು.

ತಾಲ್ಲೂಕು ಕಸಾಪ ಅಧ್ಯಕ್ಷ ನಾಗರಕೊಡಿಗೆ ಗಣೇಶ್ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಆತ್ಮವಿಶ್ವಾಸ ರೂಢಿಸಿಕೊಂಡರೆ, ಸಾಹಿತ್ಯ ಕ್ಷೇತ್ರದಲ್ಲಿ ಕತೆ, ಕವನ ರಚಿಸಲು ಪ್ರೇರಣೆ ಆಗಲಿದೆ ಎಂದರು.

ಪ್ರತಿಭಾವಂತ ವಿದ್ಯಾರ್ಥಿನಿ ಕು. ಹೆಚ್.ಎಂ. ನಿತ್ಯಶ್ರೀ ಸಮ್ಮೇಳನ ಉದ್ಘಾಟಿಸಿದರು. ರಾಘವೇಂದ್ರ ಪ್ರಾಸ್ತಾವಿಕ ಮಾತನಾಡಿದರು. ಬಿಇಓ ಕೃಷ್ಣಮೂರ್ತಿ ಸ್ವ-ರಚಿತ ಕವನ ವಾಚಿಸುವ ಮೂಲಕ ಕನ್ನಡಾಭಿಮಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕಸಾಪ ನಿಕಟಪೂರ್ವ ಅಧ್ಯಕ್ಷ ತ.ಮ. ನರಸಿಂಹ, ಚೈತನ್ಯ ಪ್ರಶಸ್ತಿ ಪುರಸ್ಕೃತೆ ಡಾ. ಸೀಮಾ ಸೆರಾವೊ, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ವಿದ್ಯಾ ಭಾರತಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ.ಎಂ. ಸದಾಶಿವ, ಕಾರ್ಯದರ್ಶಿ ಸಂಕೂರು ಪಿ.ಶಾಂತಮೂರ್ತಿ, ನಿರ್ದೇಶಕ ನಾಗೇಶ್ ಉಪಸ್ಥಿತರಿದ್ದರು. ಕತೆ, ಕವನ, ಪ್ರಬಂಧ ರಚಿಸಿ ವಾಚಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಕು. ಅಭಿಶ್ರೀ ಸ್ವಾಗತಿಸಿ, ಕು. ಅಪೂರ್ವ ಹಾಗೂ ಕು. ಮಾನ್ಯ ನಿರೂಪಿಸಿದರು. ಕು. ದರ್ಶಿನಿ ವಂದಿಸಿದರು.

ಕಾಮೆಂಟ್‌ಗಳಿಲ್ಲ