Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ಬೆಂಗಳೂರು ಚಲೋದಲ್ಲಿ ಪಾಲ್ಗೊಳ್ಳಲಿರುವ ಹೊಸನಗರ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು - ಫೆಬ್ರವರಿ 3 ರಿಂದ ಅನಿರ್ದಿಷ್ಟಾವಧಿಗೆ ಅಂಗನವಾಡಿಗಳು ಬಂದ್

ಹೊಸನಗರ : ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್‌‌ರವರು ಕರೆ ನೀಡಿ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಮುಷ್ಕರದಲ್ಲಿ ಪಾಲ್ಗೊಳ್ಳಲು ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರು ಫೆಬ್ರುವರಿ 2ರಂದು ರಾಜಧಾನಿಗೆ ತೆರಳುತ್ತಿದ್ದು, ಫೆಬ್ರವರಿ 3 ರಿಂದ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 3 ರಿಂದ ತಾಲ್ಲೂಕಿನ ಅಂಗನವಾಡಿಗಳು ಅನಿರ್ದಿಷ್ಟಾವಧಿಗೆ ಬಂದ್ ಆಗಿರಲಿವೆ.

ಈ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳ ಬಗ್ಗೆ ಹಾಗೂ ಫೆಬ್ರವರಿ ಮೂರರಿಂದ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಮನವಿ ಸಲ್ಲಿಸಿದರು.

CLICK ಮಾಡಿ - ಹೊಸನಗರದ ಪರಿಸರವಾದಿ ಗಿರೀಶ್ ಆಚಾರ್ ಅವರಿಗೆ ಒಲಿದು ಬಂತು ರಾಷ್ಟ್ರಮಟ್ಟದ ಡೆಕ್ಕನ್ ಹೆರಾಲ್ಡ್ ಚೇಂಜ್ ಮೇಕರ್ಸ್ - 2025 ಪ್ರಶಸ್ತಿ

ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಅಧ್ಯಕ್ಷೆ ಶಶಿಕಲಾ ಎನ್. ಎಸ್, ಗೀತಾ, ದಿವ್ಯ, ಮಧು, ಸುಜಾತ, ಉಮಾ, ನೀಲಾವತಿ, ವೀಣಾ, ಸತ್ಯ, ನಾಗರತ್ನ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಹಿಳೆಯರು, ಮಕ್ಕಳು, ಗರ್ಭಿಣಿಯರು, ಬಾಣಂತಿಯರು ಎದುರಿಸುತ್ತಿರುವ ಅಪೌಷ್ಟಿಕತೆ, ರಕ್ತ ಹೀನತೆ, ಆರೋಗ್ಯ ಸಮಸ್ಯೆಗಳನ್ನು ತೊಡೆದು ಹಾಕಲು 1975 ರಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಅಂಗನವಾಡಿ ಕಾರ್ಯಕರ್ತೆಯರು ಶ್ರಮ ಪಡುತ್ತಿದ್ದಾರೆ. ಆದರೆ ಇವರಿಗೆ ಯಾವುದೇ ಸೌಲಭ್ಯ ಕಲ್ಪಿಸಲಾಗಿಲ್ಲ ಎಂದು ಕಾರ್ಯಕರ್ತರು ಈ ಸಂದರ್ಭದಲ್ಲಿ ತಮ್ಮ ನೋವನ್ನು ತೋಡಿಕೊಂಡರು.

ಕಾಮೆಂಟ್‌ಗಳಿಲ್ಲ