Sports Post

ಪುಸ್ತಕ ಖರೀದಿಗೆ ಇಲ್ಲಿ ಕ್ಲಿಕ್‌ ಮಾಡಿ

ಈಗ ಬಂದ ಸುದ್ದಿ...

ನಗರ ಅರಣ್ಯ ವಲಯದಲ್ಲಿ ಕಾಡುಕೋಣ ಅಕ್ರಮ ಬೇಟೆ - ಮೂವರು ಆರೋಪಿಗಳ ಬಂಧನ - ಇಬ್ಬರು ನಾಪತ್ತೆ

ಹೊಸನಗರ : ತಾಲ್ಲೂಕಿನ ನಗರ ವಲಯ ಅರಣ್ಯದಲ್ಲಿ ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿದ ಮೂವರು ಆರೋಪಿಗಳನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ನ್ಯೂಸ್‌ ಪೋಸ್ಟ್‌ಮಾರ್ಟಮ್ ಮಾಸಪತ್ರಿಕೆಯ PDF ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಓದಲು ಕ್ಲಿಕ್ ಮಾಡಿ

ಸಾಗರ ವಿಭಾಗದ ತಾಲ್ಲೂಕಿನ ನಗರ ವಲಯ ಅರಣ್ಯದಲ್ಲಿ ಇದೇ ಜನವರಿ 8ರ ಬೆಳಗಿನ 3 ಗಂಟೆ ಸುಮಾರಿಗೆ ಸಂಪೆಕಟ್ಟೆ ಶಾಖೆ ಹೊಸೂರು ಗ್ರಾಮದ ಸರ್ವೆ ನಂಬರ್ 4ರ ಮತ್ತಿಕೈ ಮೀಸಲು ಅರಣ್ಯ ಪ್ರದೇಶದಲ್ಲಿ ಸುಮಾರು 4 ಅಥವಾ 5 ವರ್ಷದ ಒಂದು ಹೆಣ್ಣು ಕಾಡುಕೋಣವನ್ನು ಅಕ್ರಮವಾಗಿ ಬೇಟೆಯಾಡಿ, ಕಾಲು ಹಾಗೂ ತಲೆಯನ್ನು ಸ್ಥಳದಲ್ಲೇ ಬಿಟ್ಟು, ಮಾಂಸವನ್ನು ಸಾಗಾಣಿಕೆ ಮಾಡಿರುವ ಸಂಬಂಧ ಖಚಿತ ಮಾಹಿತಿ ದೊರೆತು ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಾಪತ್ತೆ ಆಗಿದ್ದರು.

ಸಾಗರ ಡಿಎಫ್‌‌ಓ ಮೋಹನ್ ಕುಮಾರ್ ಮಾರ್ಗದರ್ಶನದಲ್ಲಿ ಹೊಸನಗರ ಎಸಿಎಫ್ ಕೆ.ಬಿ. ಮೋಹನ್ ಕುಮಾರ್, ನಗರ ಆರ್‌ಎಫ್‌ಓ ಸಂತೋಷ್ ಮಲ್ಲನಗೌಡ್ರು, ಹೊಸನಗರ ‌ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

CLICK ಮಾಡಿ - ಹೊಸನಗರ ಮಾರಿಕಾಂಬಾ ಜಾತ್ರಾ ಮಹೋತ್ಸವ - ಶಾಲಾ ಮಕ್ಕಳ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಆರೋಪಿಗಳಾದ ಭಟ್ಕಳ ತಾಲ್ಲೂಕಿನ ಮುಂಡಳ್ಳಿ ಗ್ರಾಮದ ವಾಸಿ ಮಹಮ್ಮದ್ ಅಶ್ರಫ್, ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದ ಹಣಬರಕೇರಿ ವಾಸಿ ಆಲಿಬಾಪು ಯಾಸೀನ್ ಹಾಗೂ ಬೈಂದೂರು ತಾಲ್ಲೂಕು ಶಿರೂರು ಗ್ರಾಮದ ಮದ್ದೋಡಿ ರೋಡ್ ಜೋಗೂರ್ ಕ್ರಾಸ್ ವಾಸಿ ವಾಸೀಮ್‌‌ ಅಕ್ರಂನನ್ನು ಬಂಧಿಸಿದ್ದು, ಇನ್ನುಳಿದ ಇಬ್ಬರೂ ಆರೋಪಿಗಳ ಶೋಧ ಕಾರ್ಯ ಮುಂದುವರೆದಿದೆ.

ಕಾರ್ಯಾಚರಣೆಯಲ್ಲಿ ನಗರ ವಲಯ ಉಪ ಅರಣ್ಯಾಧಿಕಾರಿ ಸತೀಶ್, ಟಿ.ಪಿ. ನರೇಂದ್ರ ಕುಮಾರ್, ಅಮೃತ್ ಸುಂಕದ್, ರಾಘವೇಂದ್ರ ತೆಗ್ಗಿದ್, ರಾಜೇಂದ್ರ ಜಿ.ಡಿ, ಹಾಗೂ ಗಸ್ತು ಅರಣ್ಯ ಪಾಲಕರಾದ ಮನೋಜ್ ಕುಮಾರ್‌ ಕನೇರಿ, ಯೋಗರಾಜ್, ಎ.ವಿ.ಮನೋಜ್, ಸುಬ್ಬಣ್ಣ ಸತೀಶ್, ದಿವಾಕರ್, ಚಾಲಕ ರಾಮು ಗಾಣಿಗ ಮತ್ತು ಇತರೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ