ಹೊಸನಗರ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಹೊಸನಗರ : ತಾಲ್ಲೂಕಿನ ಪ್ರಗತಿಪರ ರೈತರಿಗೆ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಒಟ್ಟು ಐದು ಪ್ರಗತಿಪರ ರೈತರನ್ನು ಆಯ್ಕೆ ಮಾಡಿ, ಆಯ್ಕೆಯಾದವರಿಗೆ ಕೃಷಿ ಇಲಾಖೆ ವತಿಯಿಂದ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಸಹಾಯಕ ಕೃಷಿ ನಿರ್ದೇಶಕರು ಹೊಸನಗರ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅರ್ಜಿ ಸಲ್ಲಿಸುವ ರೈತರು ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ ಸೇರಿದಂತೆ ಇತರೆ ಕೃಷಿ ಚಟುವಟಿಕೆಗಳಲ್ಲಿ ಸಂಶೋಧನೆ ಅಥವಾ ಉತ್ತಮ ಸಾಧನೆ ಮಾಡಿರಬೇಕು.
VIDEO - ಅಮ್ಮನಘಟ್ಟ ಜಾತ್ರೆಯ ಪೂಜೆಯಲ್ಲಿ ಜೇನುಕಲ್ಲಮ್ಮ ದೇವಿಯು ಹೂ ಪ್ರಸಾದ ನೀಡಿದ ಅಪರೂಪದ ಕ್ಷಣಗಳು...
ಕೃಷಿ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ಮಾಹಿತಿಗಳಾದ ಆಧಾರ್ ಕಾರ್ಡ್, ಪಾಸ್ ಪುಸ್ತಕ. ಪಹಣಿ ಪತಿಗಳನ್ನು ಮತ್ತು ಸೂಕ್ತ ಛಾಯಾಚಿತ್ರದೊಂದಿಗೆ ಅರ್ಜಿಯ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಅಕ್ಟೋಬರ್ 15, 2025 ಅಂತಿಮ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಆತ್ಮ ಸಿಬ್ಬಂದಿ ಅಥವಾ ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಕಾಮೆಂಟ್ಗಳಿಲ್ಲ